ಇತ್ತೀಚಿನ ಸುದ್ದಿ
ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ ನುಜ್ಜುಗುಜ್ಜು: ಹಲವರಿಗೆ ಸಣ್ಣಪುಟ್ಟ ಗಾಯ
21/06/2026, 22:07
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ರಾಜ್ಯ ಹೆದ್ದಾರಿ ಆಗುಂಬೆ ತೀರ್ಥಹಳ್ಳಿ ನಡುವಿನ ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎರಡು ಕಾರುಗಳು ಸಹ ಸಂಪೂರ್ಣ ನುಚ್ಚುಗುಜ್ಜಾದ ಘಟನೆ ಭಾನುವಾರ ಸಂಜೆ ನಡೆದಿದೆ.
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಡ್ಜ್ ಕಾರು ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇನೋವಾ ನಡುವೆ ಈ ಅಪಘಾತ ಸಂಭವಿಸಿದೆ.. ಎರಡು ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು ಪಟ್ಟಣದ ಜೆಸಿ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರದೊಯ್ಯಲಾಗಿದೆ.
ಇನೋವಾ ಕಾರು ದಾವಣಗೆರೆ ಮೂಲದ್ದು ಎಂದು ತಿಳಿದು ಬಂದಿದ್ದು, ರಿಡ್ಜ್ ಕಾರು ಮೇಲಿನ ಕುರುವಳ್ಳಿಯದ್ದು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.













