6:06 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಡಬ: ಪತ್ನಿಯ ಕೊಂದು ಪತಿ ಆತ್ಮಹತ್ಯೆ ಶರಣು: 2 ವರ್ಷದ ಹೆಣ್ಣು ಮಗು ಅನಾಥ

22/06/2026, 18:01

ಕಡಬ(reporterkarnataka.com): ಅಲಂಕಾರು ಗ್ರಾಮದ ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿಯ ಎರಡು ವರ್ಷದ ಹೆಣ್ಣು ಮಗು ಇದೀಗ ಅನಾಥವಾಗಿದೆ.
ಕಜೆ ನಿವಾಸಿಗಳಾದ ದಿನೇಶ್ ಪೂಜಾರಿ (45) ಹಾಗೂ ಸಂಗೀತಾ (40) ಮೃತರು. ಸಂಗೀತಾ ಅವರ ಸಂಬಂಧಿ ಸುಮಲತಾ ದೂರು ನೀಡಿದ್ದು, ಕಡಬ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಂದೆ ತಾಯಿಯನ್ನು ಕಳೆದುಕೊಂಡ ಹೆಣ್ಣು ಮಗು (ಧೃವಿ) ಅಳುತ್ತಿರುವ ದೃಶ್ಯ ಕರುಳು ಕಿವುಚುವಂತಿತ್ತು.
‘ದಿನೇಶ್ ಮತ್ತು ಸಂಗೀತಾ ಕಜೆ ಗ್ರಾಮದ ಬಾಡಿಗೆ ಮನೆಯಲ್ಲಿ ಮಗುವಿನೊಂದಿಗೆ ವಾಸವಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ಶನಿವಾರ ಸಂಗೀತಾ ಅವರ ಮೊಬೈಲ್‌ಗೆ ತವರು ಮನೆಯವರು ಕರೆ ಮಾಡಿದ್ದರೂ ಪ್ರತಿಕ್ರಿಯೆ ಬಂದಿರಲಿಲ್ಲ. ಇವರ ಮನೆಯ ಪಕ್ಕದ ಮನೆವರಿಗೆ ಸಂಗೀತಾ ತಾಯಿ ಕರೆ ಮಾಡಿ ವಿಷಯ ತಿಳಿಸಿದ್ದರು. ನೆರೆಮನೆಯವರು ಪರಿಶೀಲಿಸಿದಾಗ ಮನೆಯ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಕಿಟಕಿಗಳನ್ನು ಭದ್ರವಾಗಿ ಮುಚ್ಚಲಾಗಿತ್ತು. ಮಗು ಅಳುವ ಸದ್ದು ಕೇಳಿಸುತ್ತಿತ್ತು. ಅವರು ಊರಿನವರಿಗೆ ವಿಷಯ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ ದಿನೇಶ್ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಂಗೀತಾ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು’ ಎಂದು ಸ್ಥಳೀಯರು ತಿಳಿಸಿದ್ದಾರೆ.
ದಿನೇಶ್ ಮತ್ತು ಸಂಗೀತಾ ದಂಪತಿ ಉಡುಪಿ ಜಿಲ್ಲೆಯ ಕಾರ್ಕಳದ ಬಜಗೋಳಿ ನಿವಾಸಿಗಳಾಗಿದ್ದು, ವರ್ಷದ ಹಿಂದೆ ಆಲಂಕಾರಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ಒಂದು ತಿಂಗಳಿನಿಂದ ಹೊಟೇಲ್ ಮುಚ್ಚಿತ್ತು. ದಂಪತಿ ಊರಿಗೆ ತೆರಳಿದ್ದರು. ಶುಕ್ರವಾರವಷ್ಟೇ ಆಲಂಕಾರಿನ ಬಾಡಿಗೆ ಮನೆಗೆ ಮರಳಿದ್ದರು ಎಂದು ಗೊತ್ತಾಗಿದೆ.
‘ಮಗುವಿನ 90 ಸಾವಿರ ಮೊತ್ತದ ಚಿನ್ನದ ಸರ ಕಳೆದು ಹೋಗಿತ್ತು. ಈ ವಿಚಾರವಾಗಿ ದಿನೇಶ್ ತನ್ನ ಹೆಂಡತಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಸರವನ್ನು ಹುಡುಕಲು ಅವರು ಆಲಂಕಾರಿನ ಬಾಡಿಗೆ ಮನೆಗೆ ಶುಕ್ರವಾರ ಮರಳಿದ್ದರು. ಈ ವಿಚಾರವಾಗಿಯೇ ಅಳಿಯ ನನ್ನ ಮಗಳನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ. ಹಿಂದೆಯೂ ಒಮ್ಮೆ ಆತ ಕುತ್ತಿಗೆಗೆ ಬಟ್ಟೆ ಸುತ್ತಿ ಮಗಳನ್ನು ಕೊಲೆ ಮಾಡಲು ಯತ್ನಿಸಿದ್ದ’ ಎಂದು ಮೃತ ಸಂಗೀತಾ ಅವರ ತಾಯಿ ತುಂಗಮ್ಮ ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೂಮ ರೆಡ್ಡಿ, ಡಿವೈಎಸ್ಪಿ ರೋಹಿಣಿ, ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನಾಗರಾಜ್, ಕಡಬ ಠಾಣಾಧಿಕಾರಿ ಜಂಬೂರಾಜ್ ಮಹಾಜನ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಬ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು