10:21 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು