9:02 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು