1:01 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು