8:12 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ ಯತ್ನ

24/06/2026, 15:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್ ಮಾಡಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಇಬ್ಬರು ಕಿರಾತಕರು ಹಣ ಸಿಗದಿದ್ದಾಗ ಮಹಿಳೆಯ ಫೋಟೋ ವನ್ನು ಇನ್ಸ್ಟಾ ಗ್ರಾಂನ ನಕಲಿ ಖಾತೆಯಲ್ಲಿ ಹರಿಬಿಟ್ಟು ಕಟ್ಟದಾಗಿ ಕಮೆಂಟ್ ಹಾಕಿದ ಹಿನ್ನೆಲೆಯಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಎಡಿಟ್ ಮಾಡಿದ ಫೋಟೋಗಳನ್ನ ಗೃಹಿಣಿ ಮೊಬೈಲ್ ಕಳಿಸಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು.
ಹಣ ನೀಡದಿದ್ದರೆ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದರು. ಗೃಹಿಣಿ
ಹಣ ನೀಡದ ಹಿನ್ನೆಲೆಯಲ್ಲಿ ಇನ್ಸ್ಟಾ ಗ್ರಾಂ ನಲ್ಲಿ ನಕಲಿ ಖಾತೆ ತೆರದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು 300ಕ್ಕೆ ಲಭ್ಯವಿದ್ದಾರೆ ಎಂದು ಬರೆದಿದ್ದರು.
ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋ ನೋಡಿದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಕುರಿತು
ಗೃಹಿಣಿಯ ಪತಿ ಲಕ್ಕವಳ್ಳಿ ಠಾಣೆಗೆ ದೂರು ನೀಡಿದ್ದಾರೆ.
ಗೃಹಿಣಿಗೆ ಮೆಸೇಜ್ ಮಾಡಿದ್ದು ಅದೇ ಗ್ರಾಮದ ಇಬ್ಬರು ಯುವಕರು ಎಂಬ ಆರೋಪ ಕೇಳಿ ಬರುತ್ತಿದೆ. ಬಾವಿಕೆರೆ ಗ್ರಾಮದ ಅಕ್ಷಯ್ ಹಾಗೂ ಸಾಹುಲ್ ಹಮೀದ್ ಎಂಬುವರ ಮೇಲೆ ಗೃಹಿಣಿ ಪತಿ ದೂರು ನೀಡಿದ್ದಾರೆ.
ಈ ಯುವಕರು ಹಿಂದೆ ಕೂಡ ಬೇರೆ ಮಹಿಳೆಗೂ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕೆಲಸವೂ ಅವರದ್ದೇ ಎಂದು ಮೊಬೈಲ್ ಸಂಖ್ಯೆ ಸಮೇತ ಗೃಹಿಣಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಫೋಟೋ ಹಾಕಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಬಂಧನಕ್ಕೆ ಲಕ್ಕವಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು