4:44 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು