4:28 AM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು