3:07 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು