10:13 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು