6:34 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

*”2028ರಲ್ಲಿ ನೀವು ಗೆದ್ರೆ ನಿಮ್ಮ ಮನೆ ವಾಚ್‌ಮ್ಯಾನ್ ಆಗ್ತೀನಿ, ಸೋತ್ರೆ ನೀವು ಕುಮಾರಸ್ವಾಮಿ ಮನೆಯ ವಾಚ್‌ಮನ್ ಆಗ್ತೀರಾ ?*

27/06/2026, 17:19

ಬೆಂಗಳೂರು(reporterkarnataka.com):ಕೇಂದ್ರ ಸಚಿವರಾದ ಹೆಚ್‌ಡಿಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಮಾತನಾಡುವ ನೀವು 2028ಕ್ಕೆ ಗೆದ್ದರೆ ನಾನು ನಿಮ್ಮ ಮನೆ ವಾಚ್‌ಮನ್ ಆಗುತ್ತೇನೆ, ನೀವು ಸೋತರೆ ಕುಮಾರಸ್ವಾಮಿ ಮನೆ ಮುಂದೆ ಸೆಕ್ಯೂರಿಟಿ ಆಗುತ್ತೀರಾ ಎಂದು ಎಂದು ಶಿಡ್ಲಘಟ್ಟ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಅವರು ಶಾಸಕ ಪ್ರದೀಪ್ ಈಶ್ವರ್‌ಗೆ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರದೀಪ್ ಅವರೇ ನೀವು ಶಾಸಕರಾಗಿದ್ದು ಕೇವಲ ಕಾಂಗ್ರೆಸ್ ಮತಗಳಿಂದ ಅಲ್ಲ. ಜೆಡಿಎಸ್ ಮತಗಳಿಂದ ಎಂಬುದನ್ನು ಮರೆಯಬೇಡಿ, ಶಾಸಕರಾಗುವ ಮೊದಲು ನಿಮ್ಮ ಆಸ್ತಿ ಎಷ್ಟಿತ್ತು. ಈಗ ಎಷ್ಟು ಇದೆ ಎಂದು ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರು ಕೋರ್ಟ್ ನೀಡಿದ ನೋಟಿಸ್ಸನ್ನಷ್ಟೇ ಜೆಡಿಎಸ್ ಪಕ್ಷದ ಪೇಜಿನಲ್ಲಿ ಪೋಸ್ಟ್ ಮಾಡಿದ್ದಾರೆ ಹೊರತು ಅವರು ಎಲ್ಲಿಯೂ ಪ್ರದೀಪ್ ಈಶ್ವರ್ ಹೆಸರು ಉಲ್ಲೇಖ ಮಾಡಿಲ್ಲ. ಆದರೆ ಪ್ರದೀಪ್ ಈಶ್ವರ್ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು