3:44 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ: 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

19/09/2021, 09:17

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ತಿಳಿಸಿದರು. 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು