3:53 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು