5:01 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು