5:59 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು