7:49 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು