12:13 PM Friday20 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು