1:29 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ ರೈತರ ದೂರಿನ ಸುರಿಮಳೆ

30/06/2026, 18:13

ಬೆಂಗಳೂರು(reporterkarnataka.com): ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಾಸನ ಜಿಲ್ಲಾ ರೈತ ಸಂಘಟನೆಯ ಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಈ ವೇಳೆ ಪ್ರಸ್ತಾಪಿಸಿದ ರೈತರು, ಎಚ್.ಡಿ.ದೇವೇಗೌಡ ಎಜುಕೇಷನ್ ಟ್ರಸ್ಟ್ ಮಾಡಲು ನಮ್ಮ ಭೂಮಿ ಕಬಳಿಕೆ ಮಾಡಲಾಗಿದೆ. ಅದರಲ್ಲೂ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಮ್ಮಕ್ಕಿನಿಂದ ನಿವೇಶನವೂ ಇಲ್ಲ, ಪರಿಹಾರವೂ ಇಲ್ಲ. ಐಐಟಿಗೆ ಮೊದಲು 334 ಎಕರೆ ಭೂಸ್ವಾಧೀನ ಎನ್ನುವ ಮಾತುಗಳು ಕೇಳಿಬಂದವು, ನಂತರ 1057 ಎಕರೆ ಎಂದು ಹೇಳಿದರು. ಈಗ ನೋಡಿದರೆ ಐಐಟಿ ಧಾರವಾಡಕ್ಕೆ ಹೋಗಿದೆ.ಆದರೆ, ಅದರ ಹೆಸರಲ್ಲಿ ದೇವೇಗೌಡರ ಕುಟುಂಬ ಭೂಕಬಳಿಸಲು ಸಂಚು ಮಾಡಿದೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾನು ಬಿಡದಿ ರೈತರಿಗೆ ಒಂದು ನ್ಯಾಯ, ಹಾಸನ ರೈತರಿಗೆ ಮತ್ತೊಂದು ನ್ಯಾಯ ಮಾಡುವುದಿಲ್ಲ. ರೈತರ ಕೈಗೆ ಹೆಚ್ಚಿಗೆ ಹಣ ಬಂದರೆ ಎಲ್ಲರಿಗಿಂತ ಹೆಚ್ಚು ಸಂತೋಷ ಪಡುವವನು ನಾನು. ಈ ಸರಕಾರ ರೈತರ ಪರವಾಗಿ ಇರುತ್ತದೆ. ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಸಮಸ್ಯೆಗಳ ಶೀಘ್ರ ಹಾಗೂ ಕಾನೂನುಬದ್ಧ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ ಎಂದರು.
ಸಭೆಯಲ್ಲಿ ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಯೋಜನೆ ವ್ಯಾಪ್ತಿಯ ಏಳು ಗ್ರಾಮಗಳ ರೈತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು