5:22 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ

19/09/2021, 09:53

ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಸರಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದಕ್ಕೆ ನಿಷೇಧ ಹೇರಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಮ್ಮ ಅಧಿಕೃತ ಸರಕಾರದ ಹೆಸರಿನ ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕೆಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು