7:37 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ

01/07/2026, 14:30

ಬೆಂಗಳೂರು ನಗರದಲ್ಲಿ ಮತ್ತೆ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಬಂದು ನಗರದಲ್ಲಿ ಅಕ್ರಮವಾಗಿ ವಾಸವಾಗಿ ದಲ್ಲದೆ, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶ ಮೂಲದ ಸುಹಾಗ್‌ ಮೊಂನ್ಸೂರಲಿ (29) ಮತ್ತು ಮುಕಲ್‌ (32) ಎಂಬುವರನ್ನು ಬಂಧಿಸಲಾಗಿದೆ.
ಇತರೆ 10 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಾಣಸವಾಡಿ ಮತ್ತು ಹೆಣ್ಣೂರು ಠಾಣೆಗಳ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಮೂಲಕ ಕೆಲ ಮಹಿಳೆಯರನ್ನು ಬಾಂಗ್ಲಾ ದೇಶದಿಂದ ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಿರುವ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಪಡೆದ ಸಿಸಿಬಿಯ ಮಹಿಳೆ ರಕ್ಷಣಾ ವಿಭಾಗದ ಎಸಿಪಿ ಧರ್ಮೇಂದ್ರ ಮತ್ತು ತಂಡ ಕೆಲ ದಿನಗಳ ಹಿಂದೆ ಕಾರ್ಯಾಚರಣೆ ನಡೆಸಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು.
ಈ ವೇಳೆ ಆರೋಪಿಗಳು ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

*ಬಾಂಗ್ಲಾದೇಶದ ದಾಖಲೆಗಳು ಪತ್ತೆ:* ಬಂಧಿತ ಇಬ್ಬರು ಆರೋಪಿಗಳು ಮತ್ತು ರಕ್ಷಣೆ ಮಾಡಿದ ಮಹಿಳೆ ಯರ ಬಳಿ ಬಾಂಗ್ಲಾ ದೇಶದ ಗುರುತಿನ ಚೀಟಿಗಳು ಹಾಗೂ ಇತರೆ ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ, ಆರೋಪಿಗಳ ವಿಚಾರಣೆಯಲ್ಲಿ 2 ತಿಂಗಳ ಹಿಂದೆ ಪಶ್ಚಿಮ ಬಂಗಾಳ ಮಾರ್ಗವಾಗಿ ಭಾರತ ಪ್ರವೇಶಿಸಲಾಗಿತ್ತು. ಈ ವೇಳೆ ಗಡಿಭಾಗದಲ್ಲಿ ಮಧ್ಯವರ್ತಿಗಳಿಗೆ ಸಾವಿರಾರು ರೂ. ಹಣ ಕೊಟ್ಟು ಮಹಿಳೆಯರನ್ನು ಭಾರತಕ್ಕೆ ಕರೆಸಿಕೊಳ್ಳಲಾಗಿದೆ.
ಒಂದು ತಿಂಗಳಿಂದ ನಗರದಲ್ಲಿ ವಾಸವಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಜಾಲ ತಾಣಗಳ ಮೂಲಕ ಮಹಿಳೆಯರ ಫೋಟೋ ಗಳನ್ನು ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಪರಿಚಯಸ್ಥರ ಮೂಲಕ ಗ್ರಾಹಕರನ್ನು ಸಂಪರ್ಕಿಸಲಾಗುತ್ತಿತ್ತು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

*ಗಡಿಪಾರಿಗೆ ಸಿದ್ದತೆ*
12 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳಿಗೆ ಒಪ್ಪಿಸಲಾಗಿದ್ದು, ದಾಖಲೆ ಪರಿಶೀಲಿಸಿದಾಗ ಅಕ್ರಮವಾಗಿ ಭಾರತ ಪ್ರವೇಶಿಸಿರುವುದು ಪತ್ತೆಯಾಗಿದೆ. 12 ಮಂದಿಯನ್ನು ಗಡೀಪಾರಿಗೆ ದಾಖಲೆಗಳ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಹೆಣ್ಣೂರು ಮತ್ತು ಬಾಣಸವಾಡಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸಿಸಿಬಿಯ ಮಹಿಳಾ ರಕ್ಷಣೆ ವಿಭಾಗದ ಎಸಿಪಿ ಧರ್ಮೇಂದ್ರ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ. 4 ತಿಂಗಳ ಹಿಂದೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಾಂಗ್ಲಾದೇಶಿಗರ ಪತ್ತೆ ಬಗ್ಗೆ ರಾಜ್ಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಸಾವಿರಾರು ಮಂದಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು