9:13 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್​ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!*

01/07/2026, 21:13

ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್​ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!*

ಕಾಶ್ಮೀರ(reporterkarnataka.com): ಪಾಕ್ ಆಕ್ರಮಿತ ಕಾಶ್ಮೀರದ ಜನ ಪಾಕಿಸ್ತಾನ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾವಲಕೋಟ್‌ನ ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ‘ಪಾಕ್ ಆಕ್ರಮಿತ ಕಾಶ್ಮೀರ’ ಪಾಕಿಸ್ತಾನದ ಭಾಗವಲ್ಲ ಎಂದು ಘೋಷಿಸಿದ್ದಾರೆ.
ಈ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ಜಮ್ಮು ಕಾಶ್ಮೀರ ಆವಾಮಿ ಆಯಕ್ಷನ್ ಕಮಿಟಿ ಮುಖ್ಯಸ್ಥ ಶೌಕತ್ ನವಾಜ್ ಮಿರ್ನನ್ನು ಆತನ ಇಬ್ಬರು ಸಹಚರರೊಂದಿಗೆ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಈ ಕಮಿಟಿಯ ಸುಮಾರು 600 ಜನ ಕಾರ್ಯಕರ್ತರನ್ನು ಪಾಕಿಸ್ತಾನದ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

*ಪಾಕಿಸ್ತಾನಕ್ಕೆ ನಾವು ಬೇಕು ನಮಗೆ ಪಾಕ್ ಬೇಡ!*
ರಾವಲಕೋಟ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಜಮ್ಮು ಕಾಶ್ಮೀರ ಆವಾಮಿ ಆಯಕ್ಷನ್ ಕಮಿಟಿ ನಾಯಕ ಸರ್ದಾರ್ ಅಮನ್ ಖಾನ್, ನಮಗೆ ನಿಮ್ಮ ರೇಶನ್ ಬೇಡ, ನಿಮಗೆ ಪಿಓಕೆ ಜನ ಬೇಕು. ಒಂದು ವೇಳೆ ನಮಗೆ ಬರಬೇಕಾದ ಅಗತ್ಯ ವಸ್ತುಗಳ ಬರದೇ ಹೋದರೆ, ನಾವು ಬದುಕಲು ಬೇರೆ ಮಾರ್ಗವನ್ನು ಅನುಸರಿಸಬೇಕಾಗುತ್ತದೆ ಎಂದು ಪಾಕಿಸ್ತಾನ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು