ಇತ್ತೀಚಿನ ಸುದ್ದಿ
ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ ಒಂದು ಕಡೆ ಬರುವಂತೆ ತಿಳಿಸಲಾದ ಪೋಸ್ಟರ್ ವೈರಲ್..!
02/07/2026, 23:26
ರಶ್ಮಿ ಶ್ರೀಕಾಂತ್ ನಾಯಕ್ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಮತ ಪರಿಷ್ಕರಣೆ ( SIR ) ವಿಚಾರದಲ್ಲಿ ಸಾರ್ವಜನಿಕರ ಜೊತೆಯಲ್ಲಿ ಅಧಿಕಾರಿಗಳು ಕಳ್ಳಾಟವಾಡುತ್ತಿದ್ದಾರ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಪ್ರತಿಯೊಂದು ಮನೆಗೆ ಭೇಟಿ ನೀಡಿ ಪಟ್ಟಿಯ ಪರಿಷ್ಕರಣೆ ಮಾಡಬೇಕಾದಂತ ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಿದ್ದಾರೆ ಎಂಬ ಪ್ರಶ್ನೆ ಈಗ ಮೂಡಿದೆ..
ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಬೇಕಾಗಿದ್ದಂತಹ ಬಿಎಲ್ ಓ ಗಳು ಹಾಗೂ ಬಿ ಎಲ್ ಎ ಗಳು ಸಾರ್ವಜನಿಕರನ್ನೇ ನ್ಯಾಯಬೆಲೆ ಅಂಗಡಿಗೆ ಬರುವಂತೆ ಹೇಳಿರುವ ಪೋಸ್ಟರ್ ಗಳು ಈಗ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿವೆ. ಗ್ರಾಮಸ್ಥರೆಲ್ಲರೂ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ನೊಂದಿಗೆ ಗಾರ್ಡ್ರಗದ್ದೆಯ ನ್ಯಾಯಬೆಲೆ ಅಂಗಡಿಗೆ ಬರುವಂತೆ ಪೋಸ್ಟರ್ ಮಾಡಲಾಗಿದ್ದು ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಒಳಗಾಗಿದೆ.
ಚುನಾವಣಾ ಮತ ಪರಿಷ್ಕರಣೆ ವಿಚಾರದಲ್ಲಿ ಈಗಾಗಲೇ ಹಲವು ಗೊಂದಲಗಳಿಂದ ಕೂಡಿರುವ ಜನರಿಗೆ ಇಂತಹ ಪೋಸ್ಟರ್ ಮಾಡಿ ಹರಿ ಬಿಟ್ಟಿರುವುದು ಮತ್ತಷ್ಟು ಗೊಂದಲವನ್ನು ಸೃಷ್ಟಿ ಮಾಡಿದೆ.. ಕೂಡಲೇ ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳು ಈ ವಿಷಯದ ಬಗ್ಗೆ ಮಾಹಿತಿ ಪಡೆದು, ಅಧಿಕಾರಿಗಳು ಮನೆ ಮನೆಗೆ ಹೋಗುವಂತೆ ಸೂಚನೆ ನೀಡಬೇಕಿದೆ.












