ಇತ್ತೀಚಿನ ಸುದ್ದಿ
ಸಾರಗೋಡು ಮೀಸಲು ಅರಣ್ಯ: ವಿದ್ಯುತ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವು: ಹಾಗಾದರೆ ಕಾಡೊಳಗೆ ಕರೆಂಟ್ ಹೇಗೆ ಬಂತು?
03/07/2026, 16:33
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕರೆಂಟ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ.
ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಉಂಟಾಗಿದ್ದು, ಕಾಡಲ್ಲಿ ದಂತ ಹೊಂದಿದ್ದ ಬೃಹತ್ ಗಾತ್ರದ ಗಂಡಾನೆ ಮೃತದೇಹ ಪತ್ತೆಯಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ಸತ್ತ ಜಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ, ಆನೆ ಸಾವಿಗೆ ವಿದ್ಯುತ್ ಶಾಕ್ ಕಾರಣ ಎಂದು ಪ್ರಾಥಮಿಕ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಪಂಚನಾಮೆ ಹಾಗೂ ಮುಂದಿನ ತನಿಖೆ ಆರಂಭಿಸಲಾಗಿದೆ. ವಿದ್ಯುತ್ ಸಂಪರ್ಕ ಹೇಗೆ ಎಂದು ಅರಣ್ಯ ಅಧಿಕಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ.












