ಇತ್ತೀಚಿನ ಸುದ್ದಿ
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು
05/07/2026, 21:37
ಸಂತೋಷ್ ಅತ್ತಿಗೆರೆಚಿಕ್ಕಮಗಳೂರು
info.reporterkarnataka@gmail.com
ಬೈಕಿಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟಕ್ಕೆ ಉರುಳಿದ ಘಟನೆ ಕಳಸ ತಾಲೂಕಿನ ಬೈನೇಕಾಡು ಹೋಂ ಸ್ಟೇ ಬಳಿ ನಡೆದಿದೆ.
ನಿರಂತರ ಮಳೆಯಿಂದ ಸ್ಕಿಡ್ ಆಗಿ ಕಾರು ತೋಟಕ್ಕೆ ನುಗ್ಗಿದೆ.
ಕೂಡಲೇ ಸ್ಥಳೀಯರಿಂದ ಕಾರಿನಲ್ಲಿದ್ದವರ ರಕ್ಷಣೆ ಕಾರ್ಯ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊರನಾಡಿನಿಂದ ಉಡುಪಿಗೆ ಹೋಗುತ್ತಿದ್ದ ವ್ಯಾಗನರ್ ಕಾರು ಅಪಘಾತಕ್ಕೀಡಾಗಿದೆ.
ಮಲೆನಾಡು ರಸ್ತೆಗಳು ತೇವಾಂಶದಿಂದ್ದು ವಾಹನಗಳನ್ನ ನಿಧಾನವಾಗಿ ಚಲಾಯಿಸುವಂತೆ ಸ್ಥಳಿಯರು ಮನವಿ ಮಾಡಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












