1:45 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

*3 ಕೊಲೆ, 37 ವರ್ಷ ಶಿಕ್ಷೆ: ದೇಶದಲ್ಲೇ ದೀರ್ಘಾವಧಿ ಜೈಲುವಾಸ ಅನುಭವಿಸಿ ಹೊರಬಂದ ಕಲಬುರಗಿಯ ಸಾಯ್ಬಣ್ಣ..!*

06/07/2026, 12:37

ಕಲಬುರಗಿ(reporterkarnataka.com): ದೇಶದಲ್ಲೇ ಅತ್ಯಂತ ದೀರ್ಘಾವಧಿಯ ಜೈಲು ಶಿಕ್ಷೆ ಅನುಭವಿಸಿದ ಇತಿಹಾಸ ಹೊಂದಿರುವ ಕಲಬುರಗಿ ಜಿಲ್ಲೆಯ ಜೇವರ್ಗಿಯ ಸಾಯಿಬಣ್ಣ ಲಿಂಗಪ್ಪ ನಟೇಕರ್ (72) ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸನ್ನಡತೆಯ ಆಧಾರದ ಮೇಲೆ ಮುಕ್ತಿ ಹೊಂದಿದ 24 ಜೀವಾವಧಿ ಕೈದಿಗಳಲ್ಲಿ ಈತ ಕೂಡ ಒಬ್ಬನಾಗಿದ್ದು, ಬರೋಬ್ಬರಿ 37 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಹೊರಬಂದಿದ್ದಾನೆ.
ಸಾಯಿಬಣ್ಣನ ಇತಿಹಾಸ 1988ರಲ್ಲಿ ಆರಂಭವಾಗಿತ್ತು. ತನ್ನ ಮೊದಲ ಪತ್ನಿ ಮಲ್ಕವ್ವ ಬೇರೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದ ಮೇಲೆ ಆಕೆಯನ್ನು ಕೊಲೆ ಮಾಡಿದ್ದ ಈತನಿಗೆ 1993ರಲ್ಲಿ ಶಿಕ್ಷೆಯಾಗಿತ್ತು. ಆದರೆ, ಜೈಲಿನಲ್ಲಿದ್ದಾಗ ಪೆರೋಲ್ (ತಾತ್ಕಾಲಿಕ ಬಿಡುಗಡೆ) ಮೇಲೆ ಹೊರಬಂದ ಈತ ನಾಗಮ್ಮ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದನು. 1994ರಲ್ಲಿ ಎರಡನೇ ಪತ್ನಿಯೂ ಮತ್ತೊಬ್ಬನ ಜೊತೆ ಇರುವುದನ್ನು ಕಂಡು ಆಕ್ರೋಶಗೊಂಡು ಆಕೆಯನ್ನೂ ಹಾಗೂ ತಡೆಯಲು ಬಂದ ತನ್ನದೇ ಮಗು ವಿಜಯಲಕ್ಷ್ಮಿಯನ್ನೂ ಕೊಂದಿದ್ದನು. ಮಗಳು ಮತ್ತು ಹೆಂಡತಿಯ ಕ್ರೂರ ಕೊಲೆ ಪ್ರಕರಣಕ್ಕೆ ನ್ಯಾಯಾಲಯ ಈತನಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಈತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳ ಬಳಿ 7 ವರ್ಷಗಳಿಗೂ ಹೆಚ್ಚು ಕಾಲ ಬಾಕಿ ಇತ್ತು. ಸುದೀರ್ಘ ವಿಳಂಬ ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ಕಾನೂನುಬಾಹಿರವಾಗಿ ಏಕಾಂತ ಕಾರಾಗೃಹ ವಾಸದಲ್ಲಿದ್ದ ಅಂಶವನ್ನು ಪರಿಗಣಿಸಿ, ಕರ್ನಾಟಕ ಹೈಕೋರ್ಟ್ ಈತನ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಡಿಸಿತ್ತು.
ಪ್ರಸ್ತುತ 37 ವರ್ಷಗಳ ಸುದೀರ್ಘ ಸೆರೆವಾಸ ಮುಗಿಸಿ ವೃದ್ಧಾಪ್ಯದಲ್ಲಿ ಹೊರಬಂದಿರುವ ಸಾಯಿಬಣ್ಣನಿಗೆ ತಾನು ಮಾಡಿದ ಮೂರು ಕೊಲೆಗಳ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲದಿರುವುದು ಸಾರ್ವಜನಿಕರಲ್ಲಿ ತೀವ್ರ ಆಶ್ಚರ್ಯ ಮೂಡಿಸಿದೆ. ಜೈಲಿನ ನಿಯಮಗಳ ಪ್ರಕಾರ ಸನ್ನಡತೆ ತೋರಿದರೂ, ಮಾನಸಿಕವಾಗಿ ಈತನ ಕ್ರೂರ ಮತ್ತು ಪಶ್ಚಾತ್ತಾಪವಿಲ್ಲದ ವಿಚಿತ್ರ ಮನಸ್ಥಿತಿ ಹಾಗೇ ಉಳಿದಿರುವುದು ಈ ಇಡೀ ಕಥೆಯ ಕರಾಳ ಮುಖವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು