10:15 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು: ಜನಸ್ನೇಹಿ ವೈದ್ಯ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ

06/07/2026, 22:09

ಮಂಗಳೂರು(reporterkarnataka.com): ನಗರದ ಜನಪ್ರಿಯ ವೈದ್ಯ ಡಾ. ಭರತ್ ಕುಮಾರ್ ಅವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಪದವಿನಂಗಡಿಯಲ್ಲಿ ಕ್ಲಿನಿಕ್ ಹೊಂದಿದ್ದ ಅವರು 3 ದಶಕಗಳಿಗೂ ಹೆಚ್ಚು ಕಾಲ ಜನಸ್ನೇಹಿ ವೈದ್ಯರಾಗಿ ಸುತ್ತಮುತ್ತಲಿನ ಬಡ ಕುಟುಂಬದವರಿಗೆ ವೈದ್ಯಕೀಯ ಸೇವೆ ನೀಡಿದ್ದರು.
ದಶಕಗಳ ಕಾಲ ಪದವಿನಂಗಡಿ, ಕೊಂಚಾಡಿ, ಪಚ್ಚನಾಡಿ, ಬೊಂದೇಲ್, ಕಾವೂರು, ದೇರೆಬೈಲ್ ಸೇರಿದಂತೆ ಮಂಗಳೂರಿನ ಬಹುತೇಕ ಕಡೆಗಳ ಜನರಿಗೆ ವೈದ್ಯರಾಗಿ ಸೇವೆ ಜನಸ್ನೇಹಿ ವೈದ್ಯ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
ಕಡಿಮೆ ಫೀಸಿನಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ನೀಡುವುದು ಮಾತ್ರವಲ್ಲದೆ ರೋಗಿಗಳ ಜತೆ ಆಪ್ತತೆ ಇಟ್ಟುಕೊಂಡಿದ್ದರು. ನಗುವೇ ಮರೆತು ಬಿಟ್ಟಿರುವ ಬಹುತೇಕ ಡಾಕ್ಟರ್ ಗಳ ನಡುವೆ ಡಾ. ಭರತ್ ಕುಮಾರ್ ಅವರು ರೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಕಷ್ಟ ಸುಖವನ್ನು ವಿಚಾರಿಸುತ್ತಿದ್ದರು.
ವೈದ್ಯರೆಂದರೆ ಯಮನ ತಮ್ಮ ಎಂದು ಜನರು ಹೆದರಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಡಾ. ಭರತ್ ಕುಮಾರ್ ಅವರು ಮೇರು ವ್ಯಕ್ತಿತ್ವದ ತೀರಾ ಅಪರೂಪದ ವೈದ್ಯರು. ರಿಪೋರ್ಟರ್ ಕರ್ನಾಟಕ ಬಳಗದಿಂದ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ.

ಇತ್ತೀಚಿನ ಸುದ್ದಿ

ಜಾಹೀರಾತು