8:18 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಪಾದಯಾತ್ರೆಯಲ್ಲಿ ಹರಿದು ಬಂದ ರೈತ ಪ್ರವಾಹ: ಬಾಕಿ ಹಣ ಪಾವತಿ ಒತ್ತಾಯಿಸಿ ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ; ಭಾರಿ ಪ್ರತಿಭಟನೆ

20/09/2021, 14:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿನ ಬಾಕಿ ಹಣ ನೀಡುವಂತೆ ಒತ್ತಾಯಿಸಿ ರೈತರು ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳದ ಕೃಷ್ಣ ಸಕ್ಕರೆ ಕಾರ್ಖಾನೆ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದರು.

ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡುವಂತೆ ರೈತರ ಪಾದಯಾತ್ರೆಯಲ್ಲಿ ಹಲ್ಯಾಳಕ್ಕೆ ಆಗಮಿಸಿದರು. ನಂತರ ಅವರು ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯ ವಿರುದ್ದ ಘೋಷಣೆ ಕೂಗಿದರು. ರೈತರ ಪ್ರವಾಹ ಅಥಣಿ ತಾಲೂಕಿನಿಂದ ದರೂರು ಗ್ರಾಮದಿಂದ ಕೃಷ್ಣ ಸಕ್ಕರೆ ಕಾರ್ಖಾನೆಗೆ ಹರಿದು ಬಂತು. ರೈತ ಮುಖಂಡ ಶಶಿಕಾಂತ ಪಡಸಲಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಟ್ರಾಕ್ಟರ್, ಬೈಕ್, ಹಾಗೂ ಪಾದಯಾತ್ರೆ ಮುಖಾಂತರ ಪಾದಯಾತ್ರೆಗೆ ಚಾಲನೆ ನೀಡಲಾಯಿತು.


ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದಾರೆ. ಇದು ಸಹಕಾರಿ ಸಂಘದಿಂದ ನಡೆಯುವ  ಸಕ್ಕರೆ ಕಾರ್ಖಾನೆಯಾಗಿದೆ.


ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಅಥಣಿ ಪೋಲಿಸ್ ಜಮಾವಣೆ….

ಇತ್ತೀಚಿನ ಸುದ್ದಿ

ಜಾಹೀರಾತು