ಇತ್ತೀಚಿನ ಸುದ್ದಿ
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ ಮೋಟಮ್ಮ ವಿರುದ್ಧ ಆರೋಪ
16/07/2026, 10:51
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಅದು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಶಿಫ್ಟ್ ಆಗಿದೆ.
ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದೆ. ಮಾಜಿ ಶಾಸಕ ಕುಮಾರಸ್ವಾಮಿ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಿದೆ.
ಮೂಡಿಗೆರೆ ತಾಲೂಕಿನ 50ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರಿಂದ ಸಭೆಯಲ್ಲಿ ಹಾಜರಾಗಿದ್ದಾರೆ. ಶಾಸಕಿ ನಯನ ಮೋಟಮ್ಮ ಅವರು ಹಿರಿಯ ಮುಖಂಡರ ಕಡೆಗಣನೆ ಮಾಡುತ್ತಿದ್ದಾರೆ ಎಂಬ ಆರೋಪ ಸಭೆಯಲ್ಲಿ ಕೇಳಿ ಬಂದಿದೆ.
ಹಿರಿಯರನ್ನ ಕಡೆಗಣಿಸಿ ಏಕಪಕ್ಷೀಯ ನಿರ್ಧಾರವನ್ನು ಶಾಸಕರು ಕೈಗೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.
ಮೂಡಿಗೆರೆಯಲ್ಲಿ ಕಳೆದೊಂದು ತಿಂಗಳಿಂದ ಪಕ್ಷದೊಳಗೆ ನಿರಂತರ ಶೀತಲ ಸಮರ ನಡೆಯುತ್ತಿದೆ.












