ಇತ್ತೀಚಿನ ಸುದ್ದಿ
ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು ವಶಕ್ಕೆ
17/07/2026, 21:23
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯ ಬೆಟ್ಟತೂರು ವ್ಯಾಪ್ತಿಯಲ್ಲಿ ಕಾಡು ಕೋಣ ಬೇಟೆ ಮಾಡಿ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆ ಜೀಪು ಹತ್ತಿಸಲು ಯತ್ನಿಸಿದ ವೇಳೆ ಅರಣ್ಯ ಇಲಾಖೆ ಬೇಟೆಗಾರರ ಮೇಲೆ ಗುಂಡು ಹಾರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಬೆಟ್ಟತೂರು ಗ್ರಾಮದ ಸುಬ್ರಮಣ್ಯ ದೇವಾಲಯದ ಮುಖ್ಯ ದ್ವಾರದ ಬಸ್ ಸ್ಟಾಪ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಬೇಟೆಗಾರರ ಮೇಲೆ ಮೂರು ಸುತ್ತು ಗುಂಡು ಹಾರುತಿದ್ದಂತೆ ಕಾಫಿ ತೋಟದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಜುಬೇರ್ ಮತ್ತು ಯಾಕೂಬ್ ರನ್ನು ಬಂಧಿಸಲಾಗಿದೆ. ಬಂದಿತರಿಂದ 266 ಕೆಜಿ ಮಾಂಸ, ಕೊಡಲಿ, ಹಗ್ಗ ಹಾಗೂ ಚಾಕು, ಚೂರಿ ಸೇರಿದಂತೆ ಒಂದು ಜೀಪ್ ಅನ್ನು ವಶಕ್ಕೆ ಪಡೆಯಲಾಗಿದೆ.





ಗಾಯಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿ ಚಿಕಿತ್ಸೆ ನೀಡಲಾಗುತ್ತಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.












