10:38 PM Friday17 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಯುವ ಪೀಳಿಗೆಯ ಏಕಾಗ್ರತೆಯ ಉದ್ದೀಪನಗೊಳಿಸುವ ಶಕ್ತಿ ಯೋಗಕ್ಕಿದೆ: ಜಿತಕಾಮಾನಂದಜಿ ಸ್ವಾಮೀಜಿ

17/07/2026, 21:33

ಮಂಗಳೂರು(reporterkarnataka.com): ಮನುಷ್ಯನನ್ನು ಆಧ್ಯಾತ್ಮಿಕ ಲೋಕದ ಉನ್ನತಿಗೇರಿಸುವ ಯೋಗ ನಮ್ಮ ಉಸಿರಾಗ ಬೇಕು. ಈಗಿನ ಯುವ ಪೀಳಿಗೆಯಲ್ಲಿ ಏಕಾಗ್ರತೆಯ ಕೊರತೆ ಇದೆ ಅದನ್ನು ಉದ್ದೀಪನ ಗೊಳಿಸುವ ಶಕ್ತಿ ಯೋಗಕ್ಕಿದೆ ಎಂದು ರಾಮಕೃಷ್ಣ ಮಠ ಅಧ್ಯಕ್ಷರಾದ ಜಿತಕಾಮಾನಂದಜಿ ಸ್ವಾಮೀಜಿ ಹೇಳಿದರು.
ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಮಂಗಳಾದೇವಿ ರಾಮಕೃಷ್ಣ ಮಠದ ಸಭಾಂಗಣದಲ್ಲಿ ಜರುಗಿದ ಆರೋಗ್ಯಕ್ಕಾಗಿ ಮುದ್ರಾ ಯೋಗಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.


ದೇಲಂಪಾಡಿ ಯೋಗ ಪ್ರತಿಷ್ಠಾನದಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಪ್ರಾಸ್ತವಿಕ ನುಡಿ ಹಾಗೂ ಪುಸ್ತಕದ ಬಗ್ಗೆ ವಿಶ್ಲೇಷಿದರು.
ಕಾರ್ಯಕ್ರಮದಲ್ಲಿ ಎಸ್.ಸಿ.ಎಸ್. ಹಾಸ್ಪಿಟಲ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರು ಡಾ. ಜೀವರಾಜ್ ಸೊರಕೆ ಎಮ್. ಎಸ್., ಗೌರವ ಅತಿಥಿಗಳಾಗಿ ಬೆಂಗಳೂರಿನ ಆರ್. ಎನ್. ಎಸ್. ತಾಂತ್ರಿಕ ವಿದ್ಯಾಲಯದ ಪ್ರೊ.ಡಾ.ಸುರೇಶ್ ದೇಲಂಪಾಡಿ,ಮಂಗಳೂರಿನ ಮಧುಬನ್ ಗ್ರಾಫಿಕ್ಸ್ ಮಾಲಕ ಪ್ರಸನ್ನ ಕೆ.ಉಪಸ್ಥಿತರಿದ್ದರು.
ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯೋಗ ರತ್ನ ಗೋಪಾಲ ಕೃಷ್ಣ ದೇಲಂಪಾಡಿ ಪ್ರಾಸ್ತವಿಕ ನುಡಿ ಹಾಗೂ ಪುಸ್ತಕದ ಬಗ್ಗೆ ವಿಶ್ಲೇಷಿದರು.

ಇತ್ತೀಚಿನ ಸುದ್ದಿ

ಜಾಹೀರಾತು