ಇತ್ತೀಚಿನ ಸುದ್ದಿ
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ ಸಾವು
20/07/2026, 18:54
ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಆಟವಾಡುತ್ತಾ ರಸ್ತೆಗೆ ಬಂದ ಮಗುವೊಂದಕ್ಕೆ – ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಬಳಿ ನಡೆದಿದೆ.
ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪ್ರಗತ್ ಎಂಬುವರ ಮಗು
ದೃಶ್ಯ (6 ) ಮೃತಪಟ್ಟಿದೆ. ಮನೆಯ ಪಕ್ಕದಲ್ಲಿ ಲಾರಿಯೊಂದು ನಿಂತಿತ್ತು. ಮಗು ರಸ್ತೆಗೆ ಆಟವಾಡಲು ರಸ್ತೆಗೆ ಬಂದಿದ್ದು ಲಾರಿ ಇದ್ದ ಕಾರಣ ಮಗು ಕಾಣದೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆ ತಂದರೂ ಸಹ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.












