ಇತ್ತೀಚಿನ ಸುದ್ದಿ
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ
26/07/2026, 16:43
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕುಶಾಲನಗರ ಅರಣ್ಯ ವಲಯದ ಆನೆಕಾಡು ಶಾಖೆಯ ಹೊರೂರು, ಮೋದೂರು, ಕೆದಕಲ್ ಮತ್ತು ಮೀನುಕೊಲ್ಲಿ ಶಾಖೆಯ ಚೇರಳ, ಈರಳೆ ವಳಮುಡಿ ಗ್ರಾಮಗಳ ಸುತ್ತಮುತ್ತ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಇಂದು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಾಚರಣೆಯಲ್ಲಿ ಒಟ್ಟು 5 ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲಾಗಿದೆ.


DRFO ಮಧುಕುಮಾರ್,DRFO ಸಚಿನ್ ನಿಂಬಾಲ್ಕರ್,BFO ಕುಡ್ಲೆಪ್ಪ ,BFO ನಾಗರಾಜ್, ಮಡಿಕೇರಿ, ಆನೆಕಾಡು, ಮೀನುಕೊಲ್ಲಿ RRT ಮತ್ತು ETF ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ತುರ್ತು ಅಗತ್ಯಕ್ಕಾಗಿ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಲಾಗಿತ್ತು.












