ಇತ್ತೀಚಿನ ಸುದ್ದಿ
ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು: ಜುನೈದ್ ಗಂಭೀರ ಆರೋಪ
27/07/2026, 22:25
ನವದೆಹಲಿ(reporterkarnataka.com): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರೋಧಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದಿದ್ದ ಪ್ರತಿಭಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರತಿಭಟನಾಕಾರರಿಗೆ ಉಚಿತ ಆಹಾರ ಮತ್ತು ನೀರು ವಿತರಿಸುತ್ತಿದ್ದ ಮೊಹಮ್ಮದ್ ಜುನೈದ್ ನನ್ನು ದೆಹಲಿ ಪೊಲೀಸರು ಎಂದು ಹೇಳಿಕೊಂಡ ಕೆಲವರು ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿ ರಾತ್ರಿಯಿಡೀ ಅಪಹರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.ಆದರೆ, ಈ ಆರೋಪವನ್ನು ಗಾಜಿಯಾಬಾದ್ ಪೊಲೀಸರು ತಳ್ಳಿ ಹಾಕಿದ್ದಾರೆ. ಇದು ಸಾಮಾನ್ಯ ವಿಚಾರಣೆಯಷ್ಟೇ. ಮುಸ್ತಫಾ ಅವರನ್ನು ಕೇವಲ ಪ್ರಶ್ನೆಗಾಗಿ ಕರೆಸಲಾಗಿತ್ತು ಮತ್ತು ಯಾವುದೇ ಬಂಧನ ನಡೆದಿಲ್ಲ ಎಂದು ಡಿಸಿಪಿ ಸುರೇಂದ್ರನಾಥ್ ತಿವಾರಿ ಸ್ಪಷ್ಟಪಡಿಸಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೊವೊಂದನ್ನೂ ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್ಗಢಿ ಜುನೈದ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಜುನೈದ್ ಕಣ್ಣೀರಿಡುತ್ತಿರುವ ವಿಡಿಯೋ ನೋಡಿ ತಮಗೆ ತೀವ್ರ ನೋವಾಗಿದೆ ಎಂದಿರುವ ಅವರು, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಮೇಲಿನ ದೌರ್ಜನ್ಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವ ಮೂಲಕ ಹೋರಾಡುತ್ತೇವೆ ಎಂದು ಧೈರ್ಯ ತುಂಬಿದ್ದಾರೆ.













