6:57 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:…

ಇತ್ತೀಚಿನ ಸುದ್ದಿ

Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್

28/07/2026, 18:48

ಬೆಂಗಳೂರು(reporterkarnataka.com): ರಸ್ತೆ ಬದಿಯಲ್ಲಿ ನಿಂತು ಕ್ಯಾಬ್‌ಗೆ ಕಾಯುತ್ತಿದ್ದ 26 ವರ್ಷದ ಯುವತಿಯೊಬ್ಬರಿಗೆ ನಿನ್ನ ರೇಟ್‌ ಎಷ್ಟು? ಎಂದು ಲೈಂಗಿಕವಾಗಿ ನಿಂದಿಸಿ ಪರಾರಿಯಾಗಿದ್ದ ಹಣ್ಣಿನ ವ್ಯಾಪಾರಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್‌ ನಿವಾಸಿ ಹಣ್ಣಿನ ವ್ಯಾಪಾರಿ ವಿಜಯರಾಘವ್‌ (42) ಬಂಧಿತ ಕಾಮುಕ. ಈತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮೊನ್ನೆ ರಾತ್ರಿ ರಾಮಮೂರ್ತಿನಗರದ ರಾಘವೇಂದ್ರ ಸರ್ಕಲ್‌ ಬಳಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿಯೊಬ್ಬರು ಕ್ಯಾಬ್‌ ಬುಕ್‌ ಮಾಡಿ ಕಾಯುತ್ತಿದ್ದರು. ಆಗ ಸ್ಕೂಟರ್‌ನಲ್ಲಿ ಬಂದ ಈತ ಯುವತಿಯನ್ನು ಕಂಡು ಅಸಭ್ಯವಾಗಿ ಮಾತನಾಡಿ ಲೈಂಗಿಕವಾಗಿ ನಿಂದಿಸುತ್ತಾ ನಿನ್ನ ರೇಟ್‌ ಎಷ್ಟು ಎಂದು ಕೇಳಿದ್ದಾನೆ.

ಆಗ ಧೈರ್ಯ ತೆಗೆದುಕೊಂಡ ಯುವತಿ ತಕ್ಷಣವೇ ತನ್ನ ಮೊಬೈಲ್‌ನಲ್ಲಿ ಕಾಮುಕನ ಕೃತ್ಯವನ್ನು ಸೆರೆ ಹಿಡಿದರು. ತನ್ನ ಮುಖ ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಯುವತಿ ರೆಕಾರ್ಡ್‌ ಮಾಡುತ್ತಿರುವುದನ್ನು ತಿಳಿದು ಅಲ್ಲಿಂದ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದನು. ಇತ್ತ ಯುವತಿ ತಾನು ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯನ್ನು ಕುರಿತು ಗಂಭೀರ ಪ್ರಶ್ನೆಗಳನ್ನು ಕೇಳಿ ಕಳವಳ ವ್ಯಕ್ತಪಡಿಸಿದರು.

ಈ ವಿಡಿಯೋವನ್ನು ಅವರು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್‌ ಮಾಡಿ ಆರೋಪಿಯನ್ನು ಪತ್ತೆಹಚ್ಚಿ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಈ ಬಗ್ಗೆ ರಾಮಮೂರ್ತಿನಗರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು