9:28 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ 

21/09/2021, 09:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ

ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು.

ಮತ್ತೊಂದು ಬಾರಿ ಯಾವ ಹೆಣ್ಣು ಮಗುವಿನ ಮೇಲೆಯೂ ಈ ರೀತಿಯ ದಬ್ಬಾಳಿಕೆ , ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ತಾಡಿಗೋಲ್ ಗ್ರಾಮದಿಂದ ಹೊರಟ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಾಥಾ ಹಮ್ಮಿಕೊಂಡರು. ರಸ್ತೆಯುದ್ದಕ್ಕೂ ಜಾಥಾದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಬಂದ ದಲಿತ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿದರು. 

ಕೋಲಾರ ಮದನಪಲ್ಲಿ ರಸ್ತೆ ಮೂಲಕ ಜಾಥ ಸಾಗಿ ಬರುತ್ತಿದ್ದಾಗ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರು ಹರಸಾಹಸ ಪಡುತ್ತಿದ್ದರು.

 ಶ್ರೀನಿವಾಸಪುರಕ್ಕೆ ಜಾಥಾ ಬರುವೊಳಗಾಗಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜಮಾ ಆದರು. ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯ ತನಕ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಈ ಎರಡು ಸರ್ಕಾರಗಳನ್ನು ಕಿತ್ತೊಗೆಯ ತನಕ ನಮ್ಮ ಮೇಲೆ ದೌರ್ಜನ್ಯಗಳು ನಡೆಯುತ್ತಲೆ ಇರುತ್ತವೆ. ಮುಂದಿನ ದಿನಗಳಲ್ಲಿ ಇದಕ್ಕೆ ಒಂದು ಇತಿಶ್ರೀ ಹಾಡಲೇಬೇಕು ದಲಿತ ಮುಖಂಡರಿಂದ ಕೇಳಿ ಬರುತ್ತಿತ್ತು . ರಸ್ತೆಯುದ್ದಕ್ಕೂ ಕ್ರಾಂತಿಗೀತೆಗಳನ್ನು ಹಾಡುತ್ತಾ ತಮಟೆ ವಾದ್ಯಗಳ ಸದ್ದು ಕೇಳಿ ಬರುತ್ತಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು