11:21 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೋಟೆಕಾರ್ ಬೀರಿ, ಕೊಣಾಜೆ ಬಂಟ್ಸ್ ಭವನದ ಬಳಿ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್ ತಪಾಸಣೆ

28/07/2026, 23:21

ಮಂಗಳೂರು(reporterkarnataka.com): ಕೋಟೆಕಾರ್ ಬೀರಿ ಮತ್ತು ಕೊಣಾಜೆಯ ಬಂಟ್ಸ್ ಭವನದ ಬಳಿ ದಿಢೀರ್ ಮಾದಕದ್ರವ್ಯ (ಡ್ರಗ್ಸ್) ತಪಾಸಣೆ ನಡೆಸಲಾಯಿತು.
ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಉಸ್ತುವಾರಿಯಲ್ಲಿ ಎಸಿಪಿ ಸೌತ್ (ದಕ್ಷಿಣ) ಮತ್ತು ಸೆಂಟ್ರಲ್ (ಮಧ್ಯಮ) ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ಸಂಯೋಜಿಸಿದರು.
ಈ ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಖಾಸಗಿ ಮತ್ತು ಕಾಲೇಜು ಬಸ್‌ಗಳಲ್ಲಿದ್ದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಯಿತು.
ಉಳ್ಳಾಲ ವ್ಯಾಪ್ತಿಯ ಕೋಟೇಕಾರ್ ಬೀರಿ ಬಳಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೆಂಟ್ ಅಲೋಶಿಯಸ್, ಪಿಎ ಕಾಲೇಜು,ಬ್ಯಾರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜಿನ ಒಟ್ಟು 72 ವಿದ್ಯಾರ್ಥಿಗಳನ್ನು ಮಲ್ಟಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಬಳಸಿ ತಪಾಸಣೆ ಮಾಡಲಾಯಿತು. ಇದರಲ್ಲಿ 71 ಫಲಿತಾಂಶಗಳು ನೆಗಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಬಂದಿದೆ.
ಕೊಣಾಜೆ ಠಾಣಾ ವ್ಯಾಪ್ತಿಯ ಬಂಟ್ಸ್ ಭವನದ ಬಳಿ ಪಿಎ ಕಾಲೇಜಿನ ಎರಡು ಬಸ್‌ಗಳನ್ನು ತಡೆದು, ಮಲ್ಟಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಬಳಸಿ ಒಟ್ಟು 87 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಯಿತು. ಇಲ್ಲಿ ಎಲ್ಲ ವಿದ್ಯಾರ್ಥಿಗಳ ಫಲಿತಾಂಶವೂ ನೆಗಟಿವ್ ಬಂದಿದೆ.
ಈ ದಿಢೀರ್ ಡ್ರಗ್ಸ್ ತಪಾಸಣಾ ಕಾರ್ಯಾಚರಣೆಯನ್ನು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಸಲಾಯಿತು.
ಕೇವಲ ಒಬ್ಬರಿಗೆ ಮಾತ್ರ ಪಾಸಿಟಿವ್ ಬಂದಿರುವುದು ಆಶಾದಾಯಕ ವಿಚಾರವಾಗಿದೆ. ಮಾದಕದ್ರವ್ಯ ಪಾಸಿಟಿವ್ ಬರುವ ವಿದ್ಯಾರ್ಥಿಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗುತ್ತಿದೆ, ಆದರೆ ಇನ್ನೂ ಸಾಕಷ್ಟು ಕೆಲಸಗಳು ಆಗಬೇಕಿದೆ.
ಕಾನೂನಾತ್ಮಕ ಪ್ರಕ್ರಿಯೆಗಳ ನಂತರ ಆತನನ್ನು ಕೌನ್ಸೆಲಿಂಗ್‌ಗೆ ಕಳುಹಿಸಲಾಗುತ್ತದೆ. ಈ ಕುರಿತು ಮುಂದಿನ ತನಿಖೆ ಮತ್ತು ಕ್ರಮಗಳನ್ನು ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು