4:39 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಕ್ಷರಸ್ಥರನ್ನು ಹೆಚ್ಚು ಮಾಡುವ ಮುಖಾಂತರ ದೇಶದ ಅಭಿವೃದ್ಧಿ ಜತೆ ವಿದ್ಯಾರ್ಥಿಗಳು ಕೈಜೋಡಿಸಲಿ: ಡಾ. ವೆಂಕಟೇಶ್

21/09/2021, 12:21

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಅಕ್ಷರಸ್ಥರ ಸಂಖ್ಯೆ ಯನ್ನು ಹೆಚ್ಚು ಮಾಡುವ ಮುಖಾಂತರ ಅನಕ್ಷರಸ್ಥರ ಮುಕ್ತ ಭಾರತ ಮಾಡಲು ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ. ವೆಂಕಟೇಶ್ ಕರೆ ನೀಡಿದರು

ನಾಗಮಂಗಲ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅನಕ್ಷರರ ಪ್ರಮಾಣ ಹೆಚ್ಚಿದ್ದು ಅದನ್ನು ಕಡಿಮೆ ಮಾಡಿ ದೇಶದ ಅಭಿವೃದ್ಧಿಗೆ ಮುಂದಾಗಬೇಕೆಂದು ಕರೆ ನೀಡಿದರು.

ಪ್ರಪಂಚದಲ್ಲಿ ಅನಕ್ಷರರ ಉಳಿಕೆ ಭಾರತದಲ್ಲಿ ಮಾತ್ರ ಎಂದು ಬೆರಳುಮಾಡಿ ತೋರುವ ಸ್ಥಿತಿ ದೂರ ಮಾಡುವ ಮುಖಾಂತರ ನೀವುಗಳು ನಿಮ್ಮ ನಿಮ್ಮ ಬಳಿ ಇರುವ ಅನಕ್ಷರಸ್ಥರ ಬಗ್ಗೆ ತಿಳುವಳಿಕೆ ನೀಡುವ ಮುಖಾಂತರ ಅಕ್ಷರಸ್ಥರನ್ನಾಗಿ ಮಾಡುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ರೂಕ್ಸಾನ ಕೌಸರ್ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮು, ಬ್ಯಾಂಕ್  ಆಫ್ ಬರೋಡೊ
ಸಂಯೋಜಕರಾದ ಸಾರಥಿ ನಾಗರಾಜು, ದೈಹಿಕ ಶಿಕ್ಷಣ ಅಧಿಕಾರಿ ಶಿವಣ್ಣಗೌಡರು ಉಪಸ್ಥಿತರಿದ್ದು,

ಕಾರ್ಯಕ್ರಮ ಸಹಾಯಕರಾದ ದಿವ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಸಾಕ್ಷರತಾ ಸಂಯೋಜಕರಾದ ಕೃಷ್ಣ ವಂದಿಸಿದರು. ಶ್ರೀನಿವಾಸ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು