ಇತ್ತೀಚಿನ ಸುದ್ದಿ
ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚೌಹಾಣ್ ಭೇಟಿ
30/07/2026, 15:42
ಬಂಟ್ವಾಳ(reporterkarnataka.com): ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರವೀಂದ್ರ ಚೌಹಾಣ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.





ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ಪ್ರಸಾದ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ಯಶವಂತ ಪೊಳಲಿ, ಸುಪ್ರೀತ್ ಆಳ್ವ, ಪುರುಷೋತ್ತಮ್ ಶೆಟ್ಟಿ ವಾಮದಪದವು, ಸಚಿನ್ ಅಡಪ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರಮೋಹನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.












