ಇತ್ತೀಚಿನ ಸುದ್ದಿ
Mangalore | ಪಾದುವ ಪಿಯು ಕಾಲೇಜಿನಲ್ಲಿ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮ
01/08/2026, 10:39
ಮಂಗಳೂರು(reporterkarnataka.com): ನಗರದ ನಂತೂರು ಪಾದುವ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತ್ಮಯೋರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ಎನ್. ಶರತ್ ಭಂಡಾರಿ, ಕಾರ್ಗಿಲ್ ಯುದ್ಧದ ಹಿನ್ನೆಲೆ, ಭಾರತೀಯ ಯೋಧರ ಶೌರ್ಯ, ದೇಶಭಕ್ತಿ ಹಾಗೂ ದೇಶರಕ್ಷಣೆಗಾಗಿ ಅವರು ಸಲ್ಲಿಸಿದ ಅಮೋಘ ತ್ಯಾಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾಗ ಕಾವೇರಿ ಟಿ. ಬಿ. ಹಾಗೂ ವಿಜಯಲಕ್ಷ್ಮಿ ಕಾರ್ಯನಿರ್ವಹಿಸಿದರು. ತನುಶ್ರೀ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಜೆನಿಷಾ ಮರಿಯಾ ಲೋಬೋ ವಂದನಾರ್ಪಣೆ ಸಲ್ಲಿಸಿದರು.












