10:35 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ

21/09/2021, 14:39

ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಬೊಮ್ಮಾಯಿ ಅವರ ಜಾತ್ಯತೀತ ಮನೋಭಾವವನ್ನು ಬಿಜೆಪಿ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮೂಲತಃ ಜನತಾ ದಳದಿಂದ ಬಂದ ಅವರು ಒಂದು ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದರು. ಅವರ ತಂದೆ ಜನತಾ ದಳದ ನಾಯಕರು ಎಂದು ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಧರ್ಮ- ದೇವರ ಬಗ್ಗೆ ಇತರರಿಗೆ ಪಾಠ ಹೇಳುವ ಬಿಜೆಪಿಯು ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದೆ. ಸರಕಾರ ಹೇಳದೆ ಯಾವುದಾದರು ಅಧಿಕಾರಿಗಳು ದೇಗುಲ ಒಡೆಯಲು ಸಾಧ್ಯವೇ ಎಂದು ಸೊರಕೆ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು