1:59 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ

21/09/2021, 14:39

ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಬೊಮ್ಮಾಯಿ ಅವರ ಜಾತ್ಯತೀತ ಮನೋಭಾವವನ್ನು ಬಿಜೆಪಿ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮೂಲತಃ ಜನತಾ ದಳದಿಂದ ಬಂದ ಅವರು ಒಂದು ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದರು. ಅವರ ತಂದೆ ಜನತಾ ದಳದ ನಾಯಕರು ಎಂದು ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಧರ್ಮ- ದೇವರ ಬಗ್ಗೆ ಇತರರಿಗೆ ಪಾಠ ಹೇಳುವ ಬಿಜೆಪಿಯು ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದೆ. ಸರಕಾರ ಹೇಳದೆ ಯಾವುದಾದರು ಅಧಿಕಾರಿಗಳು ದೇಗುಲ ಒಡೆಯಲು ಸಾಧ್ಯವೇ ಎಂದು ಸೊರಕೆ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು