5:38 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ‌ ಮನ್ನಣೆ; ಬಿಜೆಪಿಯಲ್ಲಿ ದ್ವೇಷ ಭಾಷಣ ಮಾಡುವವರಿಗೆ ಮಣೆ: ಮಾಜಿ ಸಚಿವ ರೈ

01/08/2026, 15:40

ಮಂಗಳೂರು(reporterkarnataka.com); ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ‌ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ ಶಾಸಕತ್ವ ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಆಗ್ರಹಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿಯ ಶಾಸಕ ಯಶ್ ಪಾಲ್ ಸುವರ್ಣ ನೀಡಿರುವ ಹೇಳಿಕೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ರಾಜಾಜಿ ಪಾರ್ಕ್‌ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.





ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದಾಗ ಅವರನ್ನು ದೇಶದ್ರೋಹಿ ಎಂದು ಬಿಂಬಿಸುವ ಪ್ರಯತ್ನ ನಡೆಯಿತು. ಆದರೆ, ನನ್ನ ಅಭಿಪ್ರಾಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಬೆಂಬಲಿಸದವರು ದೇಶದ್ರೋಹಿಗಳು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು