4:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ಪೊಲೀಸರಿಗೆ ತುಳು, ಬ್ಯಾರಿ ಭಾಷೆ ಕಾರ್ಯಾಗಾರ ಸಮಾಪ್ತಿ

21/09/2021, 18:18

ಚಿತ್ರ :ಅನುಷ್ ಪಂಡಿತ್
ಮಂಗಳೂರು(reporterkarnataka.com): ತುಳುನಾಡಿನಲ್ಲಿ ಕರ್ತವ್ಯನಿರತ ಪೊಲೀಸರಿಗೆ ಸ್ಥಳೀಯ ತುಳು ಮತ್ತು ಬ್ಯಾರಿ ಭಾಷೆ ಕಲಿತು ಜನಸಾಮಾನ್ಯರೊಂದಿಗೆ ಆತ್ಮೀಯತೆಯಿಂದ ಬೆರೆತು ಕೆಲಸ ಮಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಒಂದು ತಿಂಗಳ ಕಾಲ ಕಾರ್ಯಾಗಾರ ಏರ್ಪಡಿಸಲಾಯಿತು.

ತುಳು ಮತ್ತು ಬ್ಯಾರಿ ಕಲಿಕಾ ಕಾರ್ಯಾಗಾರದ ಸಮಾರೋಪ ಸಮಾರಂಭ ಮಂಗಳವಾರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಜರುಗಿತು. 


ಅಧ್ಯಕ್ಷತೆ ವಹಿಸಿದ ಪೊಲೀಸ್  ಕಮಿಷನರ್ ಶಶಿಕುಮಾರ್ ಮಾತನಾಡಿ, ಭಾಷೆಯ ಮೂಲಕ ಮಂಗಳೂರಿನ  ಜನರ ವಿಶ್ವಾಸಗಳಿಸಿ, ಪರಿಣಾಮಕಾರಿಯಾಗಿ  ಕರ್ತವ್ಯ ನಿರ್ವಹಿಸಲು ಸಾಧ್ಯ. ಹೊರ ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ತುಳು ಮತ್ತು ಬ್ಯಾರಿ ಭಾಷೆ ಕಲಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಮೂಲಕ ಪೊಲೀಸರು ಜನರಿಗೆ ಹತ್ತಿರವಾಗುತ್ತಾರೆ ಎಂಬ ಭಾವನೆ ನಮ್ಮದಾಗಿದೆ. ಭಾಷೆಗಳನ್ನು ಕಲಿತಷ್ಟು, ಆತ್ಮವಿಶ್ವಾಸ ಹೆಚ್ಚಾಗುತ್ತದೆ  ಎಂದು ಆಯುಕ್ತರು ಹೇಳಿದರು.


ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸರ್ ಮಾತಾನಾಡಿ, ಪೊಲೀಸರಿಗೆ ತುಳು ಮತ್ತು ಬ್ಯಾರಿ ಭಾಷೆ  ಕಲಿಸುವ ಕಾರ್ಯ ಪ್ರಶಂಶನೀಯ.  ತುಳು ಕಲಿಕೆಗೆ ಮಾತ್ರ ಸೀಮಿತವಾಗಿ ಉಳಿಯದೆ ಅದರ ಬಳಕೆ ನಿರಂತರವಾಗಿರಬೇಕು ಎಂದು ಹೇಳಿದರು.


ಪೋಲಿಸ್ ವಿದ್ಯಾರ್ಥಿಗಳಿಗೆ ತುಳುಬಾಷೆಯನ್ನು ಕಲಿಸಿದ ಉಪನ್ಯಾಸಕ, ಪತ್ರಕರ್ತ ರಾಜೇಶ್ ಕದ್ರಿ ಹಾಗೂ ಬ್ಯಾರಿ ಭಾಷಾ ಉಪನ್ಯಾಸಕ ಅಶೀರುದ್ದೀನ್ ಸಾರ್ತಬೈಲ್,ಶಂಶೀರ್ ಬುಡೋಳಿ  ಹಾಗೂ  ಹಿಂದಿನ ಸಾಲಿನಲ್ಲಿ   ಪೊಲೀಸ್ ಶಿಬಿರಾರ್ಥಿಗಳಿಗೆ ತುಳುಭಾಷೆ ಕಲಿಸಿದ ಸುಧಾ ನಾಗೇಶ್ ಅವರನ್ನು ಸನ್ಮಾನಿಸಲಾಯಿತು.

ಇನ್ನೋರ್ವ ಬ್ಯಾರಿ ಭಾಷಾ ಉಪನ್ಯಾಸಕ ರಝಾಕ್ ಅನಂತಾಡಿ ಪೊಲೀಸ್ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು