ಇತ್ತೀಚಿನ ಸುದ್ದಿ
ಚಿತ್ರದುರ್ಗ, ವಿಜಯ ನಗರ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ನ ಸುರಯ್ಯ ಅಂಜಮ್ ನೇಮಕ
02/08/2026, 23:13
ಮಂಗಳೂರು(reporterkarnataka.com):ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದ ಮೇರೆಗೆ ಜಿಲ್ಲಾವಾರು ಸಂಘಟನೆ ಬಲವರ್ಧನೆ, ಸದಸ್ಯತ್ವ ಅಭಿಯಾನ,ಕಾರ್ಯಕರ್ತರ ಸಭೆ, ಕಾರ್ಯಕ್ರಮಗಳ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಉಸ್ತುವಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಕಾಂಗ್ರೆಸ್ ನ ಸುರಯ್ಯ ಅಂಜುಮ್ ಅವರನ್ನು ರಾಜ್ಯ ಅಧ್ಯಕ್ಷ ಮಂಜುನಾಥ ಹೆಚ್.ಎಸ್. ಭರ್ತಿ ನೀಡಿ ನೇಮಕ ಮಾಡಿದ್ದಾರೆ.












