ಇತ್ತೀಚಿನ ಸುದ್ದಿ
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ
05/08/2026, 16:53
ಗಿರಿಧರ್ ಕೊಂಪುಳಿರ ಮಡಿಕೇರಿ
info.repoeterkarnataka@gmail.com
ಕಾಂಗ್ರೆಸ್ ಪಕ್ಷದಲ್ಲಿ ಸರ್ವ ಸದಸ್ಯರು ಒಗ್ಗಟ್ಟಾಗಿದ್ದೇವೆ, 2029ರಲ್ಲಿ ರಾಹುಲ್ ಗಾಂಧೀಯನ್ನು ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಹೇಳಿದರು.
ಕುಶಾಲನಗರದ ಹಾರಂಗಿಯಲ್ಲಿ ಸಚಿವ ನರೇಂದ್ರಸ್ವಾಮಿ ಅವರು ಮಾಧ್ಯಮ ಜತೆ ಮಾತನಾಡಿದರು.
ಪಕ್ಷದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇರುವುದು ಸಹಜ. ಸಚಿವ ಸ್ಥಾನ ಸಿಗದಿದ್ದರೆ ನಾನೂ ಅಸಮಾಧಾನಗೊಳ್ಳುತ್ತಿದ್ದೆ, ಒಂದೆರೆಡು ದಿನದಲ್ಲಿ ಆಂತರಿಕ ಸಮಸ್ಯೆ ಸರಿಯಾಗಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಸರ್ವ ಸದಸ್ಯರು ಒಗ್ಗಟ್ಟಾಗಿದ್ದೇವೆ, 2029ರಲ್ಲಿ ರಾಹುಲ್ ಗಾಂಧೀಯನ್ನು ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದರು.












