7:21 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ…

ಇತ್ತೀಚಿನ ಸುದ್ದಿ

ಶಾಸಕ ನಾರಾಯಣಸ್ವಾಮಿಗೆ ಸಿಗದ ಸಚಿವ ಸ್ಥಾನ: ‌ಬಂಗಾರಪೇಟೆ ಬಂದ್; ಟೈರ್‌ಗೆ ಬೆಂಕಿ, ಪ್ರತಿಭಟನೆ

06/08/2026, 18:56

ಕೋಲಾರ(reporterkarnataka.com): ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಗುರುವಾರ ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಂಘಟನೆ, ರೈತ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘದಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿದೆ. ಪಟ್ಟಣದಲ್ಲಿ ಆಟೋ ಸಂಚಾರ ಸಹ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಬೆಂಗಳೂರು ಮುಂತಾದೆಡೆ ನಿತ್ಯದ ಕೆಲಸಗಳಿಗೆ ಹೋಗುವ ಜನರು ರೈಲಿನಲ್ಲಿ ತೆರಳುತ್ತಿದ್ದಾರೆ. ಬಸ್ ಸಂಚಾರ ಎಂದಿನಂತೆ ಇದ್ದರೂ ಬಂಗಾರಪೇಟೆ ಪಟ್ಟಣ ಜನರಿಲ್ಲದೆ ಖಾಲಿಯಾಗಿದೆ.
ಶಾಸಕರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಂಗಾರಪೇಟೆ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದು, ಪೊಲೀಸರು ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು