ಇತ್ತೀಚಿನ ಸುದ್ದಿ
ಶಾಸಕ ನಾರಾಯಣಸ್ವಾಮಿಗೆ ಸಿಗದ ಸಚಿವ ಸ್ಥಾನ: ಬಂಗಾರಪೇಟೆ ಬಂದ್; ಟೈರ್ಗೆ ಬೆಂಕಿ, ಪ್ರತಿಭಟನೆ
06/08/2026, 18:56
ಕೋಲಾರ(reporterkarnataka.com): ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಗುರುವಾರ ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಂಘಟನೆ, ರೈತ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘದಿಂದ ಬಂದ್ಗೆ ಕರೆ ನೀಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿದೆ. ಪಟ್ಟಣದಲ್ಲಿ ಆಟೋ ಸಂಚಾರ ಸಹ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಬೆಂಗಳೂರು ಮುಂತಾದೆಡೆ ನಿತ್ಯದ ಕೆಲಸಗಳಿಗೆ ಹೋಗುವ ಜನರು ರೈಲಿನಲ್ಲಿ ತೆರಳುತ್ತಿದ್ದಾರೆ. ಬಸ್ ಸಂಚಾರ ಎಂದಿನಂತೆ ಇದ್ದರೂ ಬಂಗಾರಪೇಟೆ ಪಟ್ಟಣ ಜನರಿಲ್ಲದೆ ಖಾಲಿಯಾಗಿದೆ.
ಶಾಸಕರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಂಗಾರಪೇಟೆ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದು, ಪೊಲೀಸರು ಬೆಂಕಿ ನಂದಿಸಿದ್ದಾರೆ.












