ಇತ್ತೀಚಿನ ಸುದ್ದಿ
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ
08/08/2026, 20:18
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಎರಡು ದಿನಗಳ ಹಿಂದೆ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡುಗದ್ದೆ ಜಯಾರವರ ತೋಟದಲ್ಲಿ ಮೇಲೆ ದಾಳಿ ಮಾಡಿದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದಾಳಿ ನಡೆದ ಬಳಿಕ ನಡೆದ ಕಾರ್ಯಾಚರಂಯಲ್ಲಿ ಸೆರೆಗೆ ಇರಿಸಲಾಗಿದ್ದ ಬೋನಿಗೆ ಚಿರತೆ ಬಂದು ಬಿದ್ದಿದ್ದು, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆಯಿಂದ ಸೆರೆಹಿಡಿಯಲಾಗಿದೆ.
ಅರಣ್ಯ ಇಲಾಖೆಯ ಈ ಕಾರ್ಯಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಅದಲ್ಲದೆ ಗ್ರಾಮಸ್ಥರು ಕೂಲಿಕಾರ್ಮಿಕರು ಭಯಭೀರತರಾಗದೆ ಓಡಾಡಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.












