ಇತ್ತೀಚಿನ ಸುದ್ದಿ
ಸುಳ್ಯ | ಸಂಪಾಜೆ ಚೌಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
09/08/2026, 19:46
ಸುಳ್ಯ(reporterkarnataka.com): ಸಂಪಾಜೆ – ಮಾಣಿ ರಾಷ್ಟ್ರೀಯ ಹೆದ್ದಾರಿಯ ಚೌಕಿ ಬಳಿಯ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿನತ್ತ ಗೇರುಬೀಜ ಸಾಗಿಸುತ್ತಿದ್ದ ಲಾರಿ ಸಂಪಾಜೆ ಚೌಕಿ ಬಳಿಯ ತಿರುವಿನಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ವಿಷಯ ತಿಳಿದ ಮಾಜಿ ಗ್ರಾಮ ಪಂಚಾಯತ್ ಜಿ .ಕೆ ಹಮೀದ್ ,ತಾಜುದ್ದೀನ್ ಟರ್ಲಿ , ಸಾಜಿದ್, ಪೊಲೀಸ್ ಪ್ರಕಾಶ್ , ಹಾಗೂ ಸಿಬ್ಬಂದಿ ವರ್ಗ, ಊರಿನವರು ಘಟನಾ ಸ್ಥಳಕ್ಕೆ ಆಗಮಿಸಿ ಕ್ರೇನ್ ಮೂಲಕ ಲಾರಿಯನ್ನು ಎತ್ತಲಾಯಿತು. ಬಳಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಯಿತು. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.












