ಇತ್ತೀಚಿನ ಸುದ್ದಿ
ರೇಪ್ ಕೇಸ್ | ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್, ಪೆನ್ಡ್ರೈವ್ ಪತ್ತೆ: ಇಬ್ಬರ ಸಸ್ಪೆಂಡ್
12/08/2026, 18:31
ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಭಾವಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗ್ತಿದೆ ಎನ್ನುವ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಿದೆ. ಅತ್ಯಾಚಾರ ಕೇಸ್ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರೋ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಜೊತೆಗೆ ಪೆನ್ಡ್ರೈವ್ ಕೂಡ ಸಿಕ್ಕಿದ್ದು, ನಿಷೇಧಿತ ವಸ್ತುಗಳನ್ನ ಕೈದಿಗಳ ಕೈಗೆ ಕೊಟ್ಟಿದ್ಯಾರು ಎನ್ನುವ ಪ್ರಶ್ನೆ ಮೂಡಿದೆ.
ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್
ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿವೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ನಲ್ಲಿ ಮೊಬೈಲ್ ಹಾಗೂ ಪೆನ್ಡ್ರೈವ್ ಪತ್ತೆಯಾಗಿದೆ.
*ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ:*
ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆ ಜೈಲಿನ ಸೂಪರಿಡೆಂಟ್ ಸೇರಿ ಒಬ್ಬರನ್ನ ಅಮಾನತು ಮಾಡಿ ಡಿಜಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಎಸ್ಪಿ ಅಂಶುಕುಮಾರ್ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಜ್ವಲ್ ರೇವಣ್ಣಗೆ ಸಂಜೆಯೊಳಗೆ ಮೊಬೈಲ್ ಕೊಟ್ಟವರು ಯಾರು ಎನ್ನುವ ಬಗ್ಗೆ ಸ್ಪಷ್ಟನೆ ಕೊಡಲು ಸೂಚನೆ ನೀಡಲಾಗಿದೆ.ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್
ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿವೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ನಲ್ಲಿ ಮೊಬೈಲ್ ಹಾಗೂ ಪೆನ್ಡ್ರೈವ್ ಪತ್ತೆಯಾಗಿದೆ.











